ಸಂಸದ ಶ್ರೀರಾಮುಲುಗೆ ಕೇಂದ್ರ ಸಚಿವ ಸ್ಥಾನ ಗ್ಯಾರಂಟಿ.

ಸರ್ಕಾರಿಬಾಬು ಮೂಲಗಳ ಪ್ರಕಾರ ಬಳ್ಳಾರಿ ಸಂಸದ ಶ್ರೀರಾಮುಲು ಅವರಿಗೆ ಕೇಂದ್ರ ಸಚಿವ ಸ್ಥಾನ ದೊರೆಯುವುದು ಖಚಿತವಾಗಿದೆ. ರಾಜ್ಯ ವಿಧಾನಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ನಾಯಕ ಸಮುದಾಯದ ಪ್ರಭಾವಿ ನಾಯಕನಿಗೆ ಸಚಿವ ಸ್ಥಾನ ನೀಡಲು ನಿರ್ಧರಿಸಲಾಗಿದೆ.

ಇನ್ನೊಂದು ವಾರದಲ್ಲಿ ಕೇಂದ್ರ ಸಂಪುಟ ವಿಸ್ತರಣೆ ನಡೆಯಲಿದ್ದು ರೈಲ್ವೇ ರಾಜ್ಯ ಸಚಿವ ಸ್ಥಾನ ದೊರೆಯುವ ಸಂಭವ ಇದೆ.

ಸಂಸದ ಶ್ರೀರಾಮುಲು ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿದ್ದು ಯಾವುದೇ ಕ್ಷಣದಲ್ಲಿ ಅಮಿತ್ ಷಾ ಅವರಿಂದ ಕರೆಯ ನಿರೀಕ್ಷೆಯಲ್ಲಿದ್ದಾರೆ.

ನಿಮ್ಮ ಟಿಪ್ಪಣಿ ಬರೆಯಿರಿ