ಸರ್ಕಾರಿಬಾಬು Exclusive. ದಿನೇಶ್ ಗುಂಡೂರಾವ್ KPCC ಅಧ್ಯಕ್ಷ.

ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೇಸ್ ಕಮಿಟಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಆಯ್ಕೆಯಾಗಿದ್ದಾರೆ.

ಈ ಕುರಿತ ಅಧಿಕೃತ ಪ್ರಕಟಣೆ ಮಾತ್ರ ಬಾಕಿಯಿದ್ದು ಇಂದು ಸಂಜೆ ಅಥವಾ ನಾಳೆ ಘೋಷಣೆ ಆಗಲಿದೆ.

ದಿನೇಶ್ ಗುಂಡೂರಾವ್ ಅವರನ್ನು ದೆಹಲಿಗೆ ಕರೆಸಿಕೊಂಡಿರುವ ರಾಹುಲ್ ಗಾಂಧಿ ಮಹತ್ವದ ಜವಾಬ್ದಾರಿಯನ್ನು ಹೊರುವಂತೆ ಹಾಗು ಲೋಕಸಭಾ ಚುನಾವಣೆಗಳಲ್ಲಿ ಹೆಚ್ಚಿನ ಸೀಟು ಗೆಲ್ಲುವ ಕಡೆ ಗಮನ ಹರಿಸುವಂತೆ ಸೂಚಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಗಾಧಿಗೆ ಘಟಾನುಘಟಿಗಳೇ ಪ್ರಯತ್ನ ನಡೆಸುತ್ತಿದ್ದರೂ ರಾಹುಲ್ ಗಾಂಧಿ ಯುವಕರಿಗೆ ನೀಡಲು ತೀರ್ಮಾನಿಸಿದ್ದಾರೆ. ಎಚ್. ಕೆ. ಪಾಟೀಲ್ , ಬಿ.ಕೆ. ಹರಿಪ್ರಸಾದ್, ಕೆ.ಎಚ್.ಮುನಿಯಪ್ಪ ಸೇರಿದಂತೆ ಹಲವರು ಕೆಪಿಸಿಸಿ ಅಧ್ಯಕ್ಷ ಹುದ್ದೆ ಮೇಲೆ ಕಣ್ಣಿದ್ದರು.

ಆದರೆ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಯುವಕರಿಗೆ ಆದ್ಯತೆ ನೀಡಲು ಮುಂದಾಗಿದ್ದು ಕಾಂಗ್ರೇಸ್ ನಲ್ಲಿ ಹಿರಿಯರಿಗೆ ಹಿಂದಿನ ಸ್ಥಾನ ನೀಡುವುದು ಖಚಿತವಾಗಿದೆ.

ಎಂ.ಬಿ. ಶ್ರೀನಿವಾಸಗೌಡ.

ನಿಮ್ಮ ಟಿಪ್ಪಣಿ ಬರೆಯಿರಿ